ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ವೇಷಣೆಯತ್ತ ಆಸಕ್ತಿ: ಕಲಾಂ ಸಲಹೆ

Last Updated 22 ಜುಲೈ 2013, 19:34 IST
ಅಕ್ಷರ ಗಾತ್ರ

ಬೆಂಗಳೂರು: `ಭಾರತ ದೇಶವು 2020ರ ವೇಳೆಗೆ ಶಕ್ತಿಯುತ ರಾಷ್ಟ್ರವಾಗಲಿದೆ. ಈ ಅವಕಾಶವನ್ನು ಬಳಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಕ್ರಿಯಾಶೀಲರಾಗಬೇಕು' ಎಂದು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಕರೆ ನೀಡಿದರು.

ಬಿಎನ್‌ಎಂ ತಾಂತ್ರಿಕ ಸಂಸ್ಥೆಯು ಇತ್ತೀಚೆಗೆ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. `ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚಿನ ಮಹತ್ವವನ್ನು ನೀಡಿ ಆಧುನಿಕ ಅನ್ವೇಷಣೆಗಳ ಕಡೆಗೆ ಹೆಜ್ಜೆ ಹಾಕಬೇಕು. ಹೆಚ್ಚು ಪರಿಶ್ರಮ ಪಡಬೇಕು. ಆಗ ದೇಶ ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದುತ್ತದೆ' ಎಂದು ಅವರು ಅಭಿಪ್ರಾಯಪಟ್ಟರು.

`ತಂತ್ರಜ್ಞಾನ ಜನೋಪಯೋಗಿಯಾಗುವಂತೆ ಮಾಡಬೇಕು. ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನವು ಅಭಿವೃದ್ಧಿಯಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ. ಆರೋಗ್ಯ ಮತ್ತು ಕೃಷಿ ಕ್ಷೇತ್ರಗಳಲ್ಲಿ ನ್ಯಾನೊ ರೊಬೊಗಳು ಮುಂದೆ ಪ್ರಧಾನ ಪಾತ್ರವನ್ನು ವಹಿಸಲಿವೆ' ಎಂದು ಹೇಳಿದರು.

`ಸಂಸ್ಥೆಗಳು ಹಳ್ಳಿಗಳನ್ನು ದತ್ತು ಪಡೆದು ಅವುಗಳನ್ನು `ಪುರ'ಗಳಂತೆ ಅಭಿವೃದ್ಧಿಪಡಿಸಬೇಕು. ಬಿಎನ್‌ಎಂಐಟಿ ತನ್ನದೇ ಆದ `ಬಿಎನ್‌ಎಂಐಟಿ ಪುರ'ವನ್ನು ಅಭಿವೃದ್ಧಿಪಡಿಸಬೇಕು' ಎಂದರು.

`ವಿದ್ಯಾರ್ಥಿಗಳು ಕೆಲಸ ಹುಡುಕಿಕೊಂಡು ಹೋಗುವುದರ ಬದಲು ಅವರೇ ಬೇರೆಯವರಿಗೆ ಕೆಲಸ ನೀಡುವ ಮಟ್ಟಕ್ಕೆ ಬೆಳೆಯಬೇಕು. ಆಗ, ದೇಶದ ಸಂಪತ್ತು ಬೆಳೆಯುತ್ತದೆ; ಸರ್ವಾಂಗೀಣ ಅಭಿವೃದ್ಧಿಯನ್ನು ಹೊಂದುತ್ತದೆ' ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT