ಸಾಗರ (ಶಿವಮೊಗ್ಗ ಜಿಲ್ಲೆ): ಇಲ್ಲಿಗೆ ಸಮೀಪದ ಆನಂದಪುರಂನ ದಾಸಕೊಪ್ಪ ವೃತ್ತದ ಬಳಿ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಗಾಯಾಳುಗಳು ಬೆಂಗಳೂರು ಯಲಹಂಕ ಸಮೀಪ ಜಕ್ಕೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು. ಅವರು ಜೋಗಕ್ಕೆ ಪ್ರವಾಸ ಬಂದಿದ್ದು, ವಾಪಸಾಗುವಾಗ ಘಟನೆ ಸಂಭವಿಸಿದೆ.