ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: 7 ಸಾವು

Last Updated 10 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ತಾಲ್ಲೂಕಿನ ಜೋಡಿಕೊತ್ತಪಲ್ಲಿ ಗ್ರಾಮದ ಸಮೀಪ ಬೆಂಗಳೂರಿನಿಂದ ಆಂಧ್ರಪ್ರದೇಶದ ಮದನಪಲ್ಲಿಗೆ ಹೋಗುತ್ತಿದ್ದ ಖಾಸಗಿ ಬಸ್ ಉರುಳಿ ಬಿದ್ದು 7 ಜನ ಸ್ಥಳದಲ್ಲೇ ಮೃತಪಟ್ಟು 20ಕ್ಕೂ ಹೆಚ್ಚು ಜನ ತೀವ್ರ ಗಾಯಗೊಂಡಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ನೆಲೆಸಿರುವ ಈ ಕಡೆಯ ನಿವಾಸಿಗಳು ಯುಗಾದಿ ಹಬ್ಬಕ್ಕೆ ತಮ್ಮ ಗ್ರಾಮಗಳಿಗೆ  ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ರಾತ್ರಿ 7.30ರ ಸಮಯದಲ್ಲಿ ಶ್ರೀನಿವಾಸಪುರದಿಂದ ಮದನಪಲ್ಲಿಗೆ ಹೋಗುತ್ತಿದ್ದ ಇನ್ನೊಂದು ಖಾಸಗಿ ಬಸ್ಸನ್ನು ಹಿಂದಕ್ಕೆ ಹಾಕುವ ಪ್ರಯತ್ನದಲ್ಲಿ ಈ ಘಟನೆ ಸಂಭವಿಸಿದೆ. 

ಪ್ರಯಾಣಿಕರು ಬಸ್ಸಿನ ಒಳಗಡೆ ಮಾತ್ರವಲ್ಲದೆ, ಮೇಲ್ಭಾಗದಲ್ಲೂ ಕುಳಿತು ಪ್ರಯಾಣಿಸುತ್ತಿದ್ದರು. ಬಸ್ ಮಗುಚಿ ಬೀಳುತ್ತಲೇ ಮೇಲೆ ಕುಳಿತಿದ್ದ ಪ್ರಯಾಣಿಕರು ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡರು, ಕೆಲವರು ಸ್ಥಳದಲ್ಲಿಯೇ ಮೃತಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT