ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಎಸ್‌ಬಿಐ ವ್ಯವಸ್ಥಾಪಕ ಸಾವು

Last Updated 11 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಹೊಸಕೋಟೆ: ಭಾರತೀಯ ಸ್ಟೇಟ್ ಬ್ಯಾಂಕ್‌ನ ಕಾಡುಗೋಡಿ ಶಾಖೆ ವ್ಯವಸ್ಥಾಪಕ ಹೊಸಕೋಟೆ ಸಿ.ಚಂದ್ರಮೋಹನ್ (56) ಅವರು ಭಟ್ಟರಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಬ್ಯಾಂಕ್‌ನ ಕರ್ತವ್ಯ ಮುಗಿಸಿಕೊಂಡು ಇಂದಿರಾನಗರದಲ್ಲಿನ ತಮ್ಮ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ವೇಗ ಬಂದ ಸರಕು ಸಾಗಣೆ ಆಟೋ ಡಿಕ್ಕಿ ಹೊಡೆಯಿತು. ಆಗ ಅವರ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟರು.
 
ಹಿಂಬದಿ ಕುಳಿತಿದ್ದ ಬ್ಯಾಂಕ್‌ನ ಸಹದ್ಯೋಗಿ ಸಿಬ್ಬಂದಿ ಬಾಬುರಾವ್ ಅವರಾಧೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ನಂತರ ಆಟೋ ನಿಲ್ಲಿಸದೆ ಪರಾರಿಯಾಗಿದೆ. ಆವಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT