ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಖಾಸಗಿ ಕಂಪೆನಿ ಉದ್ಯೋಗಿ ಸಾವು

Last Updated 8 ಜನವರಿ 2014, 20:17 IST
ಅಕ್ಷರ ಗಾತ್ರ

ಬೆಂಗಳೂರು: ತುಮಕೂರು ರಸ್ತೆಯ ಎಂಟನೇ ಮೈಲಿ ಬಳಿ ಬುಧವಾರ ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಕಂಪೆನಿ­ಯೊಂದರ ಉದ್ಯೋಗಿ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಬ್ಯಾಡರಹಳ್ಳಿ ಸಮೀಪದ ಬಿಇಎಲ್‌ ಲೇಔಟ್‌ ನಿವಾಸಿ ರಮೇಶ್ (23) ಮೃತ­ಪಟ್ಟವರು. ತಮಿಳುನಾಡು ಮೂಲದ ರಮೇಶ್, ಪೀಣ್ಯ ಎರಡನೇ ಹಂತದಲ್ಲಿರುವ ಆದರ್ಶ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಸ್ನೇಹಿತ ಗಜೇಂದ್ರ ಅವರ ಜತೆ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಆವರಣದಲ್ಲಿ ನಡೆಯುತ್ತಿರುವ ಮೇಳಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೀಣ್ಯ ಎಂಟನೇ ಮೈಲಿ ಬಳಿ ಎದುರಿನಿಂದ ಬೈಕ್‌ ಓಡಿಸಿಕೊಂಡು ಬಂದ ಉಮೇಶ್,  ರಮೇಶ್‌ರ ಬೈಕ್‌ಗೆ ವಾಹನ ಗುದ್ದಿಸಿದ್ದಾರೆ. ಈ ವೇಳೆ ರಸ್ತೆ ವಿಭಜಕದ ಮೇಲೆ ಬಿದ್ದ ರಮೇಶ್‌ರ ತಲೆ ಹಾಗೂ ಎದೆ ಭಾಗಕ್ಕೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT