ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿ ಬುಧವಾರ ರಾತ್ರಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆಜಿರಾ ಭಾನು (35) ಎಂಬುವರು ಸಾವನ್ನಪ್ಪಿದ್ದಾರೆ.
ಮೂಲತಃ ರಾಮನಗರ ಜಿಲ್ಲೆ ಚನ್ನಪಟ್ಟಣದ ಆಜಿರಾ ಅವರು ನಗರದ ನೀಲಸಂದ್ರದಲ್ಲಿರುವ ತಂಗಿಯ ಮನೆಗೆ ಬಂದಿದ್ದರು. ಅವರು ಸೈಯದ್ ರಬ್ಬಾನಿ ಎಂಬ ಪರಿಚಿತ ವ್ಯಕ್ತಿಯೊಂದಿಗೆ ಬೈಕ್ನಲ್ಲಿ ಚನ್ನಪಟ್ಟಣಕ್ಕೆ ವಾಪಸ್ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಲಾರಿ, ಸೈಯದ್ ಅವರ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ನಿಂದ ಕೆಳಗೆ ಬಿದ್ದ ಆಜಿರಾ ಅವರ ಮೇಲೆ ಲಾರಿ ಹರಿದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೈಯದ್ ಅವರ ಬಲಗಾಲು ಮುರಿದಿದೆ ಮತ್ತು ತಲೆಗೆ ತೀವ್ರ ಪೆಟ್ಟಾಗಿದೆ. ಘಟನೆ ನಂತರ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.