ಅಸ್ಥಿಪಂಜರ ಸಿಕ್ಕ ಜಾಗದಲ್ಲಿ ನೀರು ನಿಂತು ಜೊಂಡು ಬೆಳೆದಿರುವುದರಿಂದ ಅದು ಯಾರಿಗೂ ಕಾಣುತ್ತಿರಲಿಲ್ಲ. ದನ ಕಾಯುವ ಹುಡುಗರು ಅಸ್ಥಿಪಂಜರದ ಬಗ್ಗೆ ಪೊಲೀಸರಿಗೆ ಸೋಮವಾರ ಸುದ್ದಿ ಮುಟ್ಟಿಸಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ, ನಂತರ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅಸ್ಥಿಪಂಜರದ ಲಿಂಗ ಹಾಗೂ ವಯಸ್ಸು ತಿಳಿಯಲು ಮುಂದಿನ ಕ್ರಮ ಕೈಗೊಂಡಿದ್ದಾರೆ.