ಹರೀಶ್ ಸಾಳ್ವೆ ಅವರು ಬೇರೊಂದು ಪ್ರಕರಣದ ವಿಚಾರಣೆಯ ವೇಳೆ ಪೊಲೀಸ್ ವ್ಯವಸ್ಥೆ ಸುಧಾರಣೆಯ ಬಗ್ಗೆ ವಾದ ಮಂಡಿಸುತ್ತಾ ಉತ್ತರ ಪ್ರದೇಶದ ಶಾಸಕರೊಬ್ಬರು ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ಒಪ್ಪಿಸುವ ಅಗತ್ಯವಿದೆ ಎಂದರು. ಅದಕ್ಕೆ ಪ್ರತಿಯಾಗಿ ಮುಖ್ಯ ನ್ಯಾಯಾಮೂರ್ತಿಗಳು ಅಂತಹ ಅರ್ಜಿ ಬಂದರೆ ಅದನ್ನು ಪರಿಶೀಲಿಸುವುದಾಗಿ ನುಡಿದರು.