ಶ್ರೀನಗರ(ಪಿಟಿಐ): ಸಂಸತ್ತಿನ ಮೇಲೆ ದಾಳಿ ಮಾಡಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಅಫ್ಜಲ್ಗುರುವಿಗೆ ಕ್ಷಮಾದಾನ ನೀಡುವ ಕುರಿತು ಕಾಶ್ಮೀರ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳ ಬೇಕು ಹಾಗೂ ಈ ನಿರ್ಣಯಕ್ಕೆ ಕೇಂದ್ರ ಸರ್ಕಾರ ಯಾವುದೇ ರೀತಿ ವ್ಯತಿರಿಕ್ತವಾಗಿ ಪ್ರತಿಕ್ರಿಯಿಸಬಾರದೆಂದು ಪಕ್ಷೇತರ ಶಾಸಕ ಅಬ್ದುಲ್ರಶೀದ್ ಶನಿವಾರ ವರದಿಗಾರರಿಗೆ ತಿಳಿಸಿದ್ದಾರೆ.
ಕ್ಷಮದಾನ ನಿರ್ಧಾರದ ಕುರಿತು ಕೇಳಿರುವ ಅರ್ಜಿಯನ್ನು ವಿಧಾನಸಭೆ ಕಾರ್ಯಾಲಯಕ್ಕೆ ಶುಕ್ರವಾರ ಸಲ್ಲಿಸಲಾಗಿದೆ. ಈ ಅರ್ಜಿಯ ಬಗ್ಗೆ ಆಡಳಿತ ಪಕ್ಷ ನ್ಯಾಷನಲ್ ಕಾನ್ಫರೆನ್ಸ್ ಅಥವಾ ವಿರೋಧ ಪಕ್ಷವಾದ ಪಿಡಿಪಿ ತೆಗೆದುಕೊಳ್ಳುವ ನಿರ್ಧಾರವನ್ನು ಎದುರು ನೋಡುತ್ತಿರುವುದಾಗಿ ಅವರು ಹೇಳಿದ್ದಾರೆ.