ಶಿವಮೊಗ್ಗ: ಸರ್ಕಾರ ಸಾಧನಾ ಸಮಾವೇಶದಲ್ಲಿ ಈವರೆಗೆ ಮಾಡಿದ ಅಭಿವೃದ್ಧಿ ಕಾರ್ಯಗಳ ಸತ್ಯಾಂಶದ ವರದಿಯನ್ನು ಬಹಿರಂಗಪಡಿಸಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದರು.
ಶಿಕಾರಿಪುರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರ ದಿನಗಳನ್ನು ಪೂರೈಸಿದ್ದನ್ನೇ ಸಾಧನೆಯಾಗಿ ಬಿಂಬಿಸುತ್ತಿರುವ ಸರ್ಕಾರ, ರಾಜ್ಯಕ್ಕೆ ನೀಡಿದ ಕೊಡುಗೆ ಏನೆಂಬುದನ್ನು ಜನತೆ ಮುಂದಿಡಬೇಕು ಎಂದು ಒತ್ತಾಯಿಸಿದರು.