ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಹೆಸರಲ್ಲಿ ರಾಜಕೀಯ ಬೇಡ

Last Updated 20 ಸೆಪ್ಟೆಂಬರ್ 2011, 6:00 IST
ಅಕ್ಷರ ಗಾತ್ರ

ಅರಸೀಕೆರೆ: ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಾಗಲಿ ಅಥವಾ ಜಾತೀಯತೆ ಮಾಡುತ್ತ ಪ್ರಗತಿಗೆ ಮಾರಕವಾಗಿದ್ದೇನೆ ಎಂಬುದನ್ನು ಸಾಬೀತು ಪಡಿಸಿದರೆ ಶಾಸಕ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಸವಾಲೆಸೆದರು.

ತಾಲ್ಲೂಕಿನ ಕೆ.ಶಂಕರನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕಡಲಮಗೆ ಗ್ರಾಮದಲ್ಲಿ ರೂ. 6 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನವನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಶಾಸಕನಾಗಿ ಆಯ್ಕೆಯಾದ ಬಳಿಕ ಜಾತ್ಯತೀತವಾಗಿ ಯಾವ ಸಮುದಾಯಕ್ಕೂ ತೊಂದರೆಯಾಗದಂತೆ ನಡೆದುಕೊಂಡು ಬಂದಿದ್ದರೂ, ಪದೇ ಪದೇ ತಮ್ಮ ವಿರುದ್ಧ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆ ಬಂದಾಗ ರಾಜಕೀಯ ಮಾಡಲಿ. ಆದರೆ, ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರಸದೆ, ಪಕ್ಷಬೇಧ ಮರೆತು ಎಲ್ಲರೂ ಒಟ್ಟಾಗಿ ಹೋದರೆ ತಾಲ್ಲೂಕನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದು ಎಂದು ಹೇಳಿದರು.

ಶಂಕರನಹಳ್ಳಿ ಗ್ರಾ.ಪಂ. ಅಧ್ಯಕ್ಷ ಎಸ್.ಆರ್.ಮರುಳಪ್ಪ ಉದ್ಘಾಟಿಸಿದರು. ತಾ.ಪಂ. ಉಪಾಧ್ಯಕ್ಷ ಹಾರನಹಳ್ಳಿ ಶಿವಮೂರ್ತಿ, ಅರಸೀಕೆರೆ ಪುರಸಭಾ ಮಾಜಿ ಅಧ್ಯಕ್ಷ ಎನ್.ಎಸ್.ಸಿದ್ದರಾಮಶೆಟ್ಟಿ, ಇಓ ಚಂದ್ರಶೇಖರ್ ಮಾತನಾಡಿದರು.

ಜಿ.ಪಂ. ಸದಸ್ಯೆ ಪಾರ್ವತಮ್ಮ, ಮಾಜಿ ಸದಸ್ಯ ಕೆ.ಪಿ.ಶಿವಮೂರ್ತಿ, ಗ್ರಾ.ಪಂ. ಸದಸ್ಯರಾದ ಚನ್ನಬಸಪ್ಪ, ಗಂಗಾಧರಪ್ಪ, ಭಾಗ್ಯಮ್ಮ, ಮಹೇಶ್, ಮೈಲಾರಪ್ಪ, ಡಿ.ಎಂಕುರ್ಕೆ ಗ್ರಾ.ಪಂ. ಅಧ್ಯಕ್ಷ ದಯಾನಂದ, ಮುಖಂಡರಾದ ನಂಜುಂಡಶೆಟ್ಟಿ, ಬಸವರಾಜು, ಉಪ ತಹಶೀಲ್ದಾರ್ ಮೋಹನ್‌ಬೆಣ್ಣಿ ಉಪಸ್ಥಿತರಿದ್ದರು.
ತಾ.ಪಂ. ಅಧ್ಯಕ್ಷ ಕೆ.ಎಂ. ನಂಜುಂಡಪ್ಪ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT