ತುರುವೇಕೆರೆ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಯೋಜನೆ ಹಮ್ಮಿಕೊಂಡಿಲ್ಲ. ಶಾಸಕರ ನಿಧಿಯನ್ನೇ ಬಿಡುಗಡೆ ಮಾಡದ ಕಾರಣ ಕ್ಷೇತ್ರಗಳಲ್ಲಿ ನಯಾಪೈಸೆ ಅಭಿವೃದ್ಧಿ ಕೆಲಸ ಮಾಡಲಾಗುತ್ತಿಲ್ಲ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಸುದ್ದಿಗೋಷ್ಠಿಯಲ್ಲಿ ದೂರಿದರು.
ಕಳೆದೊಂದು ವಾರದಿಂದ ಮಳೆಯಾಗಿ ರಸ್ತೆಗಳು ಕೆಸರು ಗದ್ದೆಗಳಾಗಿವೆ. ಸಿಎಂಜಿಎಸ್ವೈ ಹಾಗೂ ಸುವರ್ಣ ಗ್ರಾಮ ಯೋಜನೆಯಡಿ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ ಎಂದರು.
ಕಾಂಗ್ರೆಸ್ ಮುಖಂಡರು ವರ್ಗಾವಣೆ ದಲ್ಲಾಳಿಗಳಂತೆ ವರ್ತಿಸುತ್ತಿದ್ದಾರೆ. ಸೆಪ್ಟೆಂಬರ್ ಮುಗಿಯುತ್ತಾ ಬಂದರೂ ಅಧಿಕಾರಿಗಳ ವರ್ಗಾವಣೆ ನಿಂತಿಲ್ಲ. ಅಧಿಕಾರಿಗಳನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಸ್ಥಳಿಯ ರೈತರು ಬೆಳೆದ ಅಕ್ಕಿ ಕೆಜಿಗೆ `18ರಂತೆ ಲಭ್ಯವಿದೆ. ಆದರೆ ಸರ್ಕಾರ ದೂರದ ಒಡಿಶಾದಿಂದ ಕೆಜಿಗೆ ` 25ರ ದರದಲ್ಲಿ ಅಕ್ಕಿ ಕೊಳ್ಳುತ್ತಿದೆ. ಇದರಿಂದ ಸುಮಾರು ರೂ.500 ಕೋಟಿಯಷ್ಟು ಆದಾಯ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ ಎಂದು ವಿಶ್ಲೇಷಿಸಿದರು.
ಮುಖಂಡರಾದ ಎನ್.ಆರ್.ಸುರೇಶ್, ಜಫ್ರುಲ್ಲಾ, ಹಿರಣ್ಣಯ್ಯ ಇತರರು ಉಪಸ್ಥಿತರಿದ್ದರು.