ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯರ್ಥಿ ಅನರ್ಹತೆ ಅಧಿಕಾರ: ಆಯೋಗ ಸಮರ್ಥನೆ

Last Updated 2 ಜೂನ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಲೆಕ್ಕ ತೋರಿಸಿದರೆ ಅಂತಹ ಅಭ್ಯರ್ಥಿಯನ್ನು ಅನರ್ಹಗೊಳಿಸುವ ಅಧಿಕಾರ ತನಗೆ ಇದೆ ಎಂದು ಚುನಾವಣಾ ಆಯೋಗ ಪ್ರತಿಪಾದಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ ಚವ್ಹಾಣ್ ಅವರಿಗೆ ಸಂಬಂಧಿಸಿದ `ಕಾಸಿಗಾಗಿ ಸುದ್ದಿ' ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿರುವ ಆಯೋಗವು, ತನ್ನ ಅಧಿಕಾರವನ್ನು ಬಲವಾಗಿ ಸಮರ್ಥಿಸಿಕೊಂಡಿದೆ.

ಸುಳ್ಳು ಲೆಕ್ಕ ಕೊಡುವ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ ಎಂಬ ಕಾನೂನು ಸಚಿವಾಲಯದ ಹೇಳಿಕೆಯನ್ನು ಪ್ರಮಾಣಪತ್ರದಲ್ಲಿ ಅಲ್ಲಗಳೆದಿದೆ.

ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸರಿಯಾದ ಲೆಕ್ಕಾಚಾರ ನಿರ್ವಹಿಸದೇ ಹೋದರೆ ಅಂತಹ ಅಭ್ಯರ್ಥಿಯನ್ನು ಮೂರು ವರ್ಷಗಳ ಅವಧಿಗೆ ಅನರ್ಹಗೊಳಿಸಲು ಅಧಿಕಾರವಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ವೆಚ್ಚದ ಕುರಿತು ಪರಿಶೀಲನೆ ನಡೆಸುವುದಷ್ಟೇ ತನ್ನ ಕೆಲಸವಲ್ಲ, ಇದಕ್ಕೆ ಸಂಬಂಧಿಸಿದಂತೆ ಸುಳ್ಳು ಲೆಕ್ಕಾಚಾರ ಕೊಡುವವರ ವಿರುದ್ಧ ಕ್ರಮ ಜರುಗಿಸಲು ಕೂಡ ತನಗೆ ಅಧಿಕಾರವಿದೆ ಎಂದು ಚುನಾವಣಾ ಆಯೋಗ ಪ್ರತಿಪಾದಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT