ಕೃಷ್ಣರಾಜಪುರ: ವಸ್ತು ಪ್ರದರ್ಶನವು ಅರಿವು ಮೂಡಿಸುವಲ್ಲಿ ಸಹಕಾರಿಯಾಗಿದೆ ಎಂದು ವಿದ್ಯಾಮಂದಿರದ ಅಧ್ಯಕ್ಷ ವೈ.ಮುರಳೀಧರ ಅವರು ಅಭಿಪ್ರಾಯ ಪಟ್ಟರು.
ದೂರವಾಣಿ ನಗರ ಐಟಿಐ ವಿದ್ಯಾಮಂದಿರವು ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಎರಡು ದಿನಗಳ ಅಂತರ ಪ್ರೌಢ ಶಾಲೆ ಮಟ್ಟದ ಎರಡು ದಿನಗಳ ವಿಜ್ಞಾನ ವಸ್ತು ಪ್ರದರ್ಶನ ಮತ್ತು ರಸ ಸ್ಫರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ರೀತಿ ವಿಜ್ಞಾನ ವಸ್ತು ಪ್ರದರ್ಶನಗಳನ್ನು ಆಯೋಜಿಸುವುದರಿಂದ ಆಯಾ ಸ್ಥಳೀಯ ವಿದ್ಯಾರ್ಥಿಗಳು ಇತರೆ ವಿದ್ಯಾರ್ಥಿಗಳ ಜೊತೆಯಲ್ಲಿ ಬೆರೆತು ಪರಸ್ಪರ ಮಾರ್ಗದರ್ಶನ ಪಡೆದುಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು.
12 ಶಾಲೆಗಳಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ್ದರು.