ಅದಕ್ಕಾಗಿ ನೌಕರರನ್ನು ಬೇರೆ ಮತಕ್ಷೇತ್ರದಲ್ಲಿ ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳಬೇಕು' ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಬಿ. ಸೌದಾಗರ ಮನವಿ ಮಾಡಿದ್ದಾರೆ.
`ಮತದಾರರ ಪಟ್ಟಿ ಪ್ರಕಟಪಡಿಸಿದ ಸಂದರ್ಭದಲ್ಲಿ ಯಾವುದೇ ತೊಂದರೆಗಳು ಅಡೆತಡೆಗಳು ಕಂಡು ಬರುವುದಿಲ್ಲ. ಆದರೆ, ಚುನಾವಣೆಯ ದಿನ ಮತದಾನದ ದಿನದಂದು ಮತದಾರರ ಪಟ್ಟಿಯಲ್ಲಿ ಅನೇಕರ ಹೆಸರುಗಳನ್ನು ತೆಗೆದುಹಾಕಿ ಮತದಾನಕ್ಕೆ ಅಡೆತಡೆ ಉಂಟು ಮಾಡುವ ಸಾಧ್ಯತೆ ಇದೆ' ಎಂದು ಪ್ರಕಟಣೆಯಲ್ಲಿ ಸಂಶಯ ವ್ಯಕ್ತವಾಗಿದೆ.