ಬೆಂಗಳೂರು: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘವು ನಗರದಲ್ಲಿ ನಡೆಸುತ್ತಿರುವ ಉಚಿತ ವಿದ್ಯಾರ್ಥಿನಿಲಯಕ್ಕೆ ಆಹ್ವಾನಿಸಿದ್ದ ಅರ್ಜಿಯ ದಿನಾಂಕವನ್ನು ಜುಲೈ 31ರವರೆಗೆ ವಿಸ್ತರಿಸಿದೆ.
ತಾಂತ್ರಿಕ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಇತ್ಯಾದಿಗಳಲ್ಲಿ ವ್ಯಾಸಂಗ ಮಾಡಲಿರುವ ಈಡಿಗ ಜನಾಂಗದ ಬಡ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿವರಗಳಿಗೆ : ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ, ಈಡಿಗ ಭವನ, ನಂ.185, ರಾಜೀವ್ ಗಾಂಧಿ ವೃತ್ತ, ಶೇಷಾದ್ರಿಪುರ. ದೂ- 2356 0574.