ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಧಕ್ಕೆ ನಿಂತ ಚರಂಡಿ ಕಾಮಗಾರಿ

Last Updated 1 ಏಪ್ರಿಲ್ 2013, 9:26 IST
ಅಕ್ಷರ ಗಾತ್ರ

ಬೀದರ್: ನಗರದ ವಾರ್ಡ್ ಸಂಖ್ಯೆ 32 ರ ವ್ಯಾಪ್ತಿಯ ನಜರತ್ ಕಾಲೋನಿಯಲ್ಲಿ ಚರಂಡಿ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದರಿಂದ ನಾಗರಿಕರು ತೊಂದರೆ ಅನುಭವಿಸುವಂತಾಗಿದೆ.

ಕರ್ನಾಟಕ ಕಾಲೇಜು ಸಮೀಪ ಇರುವ ಕಾಲೊನಿಯಲ್ಲಿ ತಿಂಗಳ ಹಿಂದೆ ಚರಂಡಿ ಕಾಮಗಾರಿ ಆರಂಭಿಸಲಾಗಿದೆ. ಇದೀಗ ಅರ್ಧಕ್ಕೆ ಕೈಬಿಡಲಾಗಿದೆ ಎಂದು ನಾಗರಿಕರು ಆಪಾದಿಸಿದ್ದಾರೆ.

ಚರಂಡಿಗಾಗಿ ಭೂಮಿ ಅಗೆದು ಹಾಗೆಯೇ ಬಿಟ್ಟಿದ್ದರಿಂದ ವಾಹನ ಸಂಚಾರ, ಮಕ್ಕಳು, ವೃದ್ಧರ ಓಡಾಕ್ಕೆ ಸಮಸ್ಯೆ ಆಗುತ್ತಿದೆ ಎಂದು ದೂರಿದ್ದಾರೆ. ಕೂಡಲೇ ಕಾಲೋನಿಯಲ್ಲಿ ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಕಾಲೋನಿಯ ಡೇವಿಡ್ ಸ್ಯಾಮುಯೇಲ್, ಅಶೋಕಕುಮಾರ್, ತುಕಾರಾಮ ಮಾದಪ್ಪ, ಡೇವಿಡ್ ನಥಾನಿಯಲ್, ಮಾಣಿಕ, ಶರಣಪ್ಪ, ಸಂಜೀವ್, ಡ್ಯಾನಿಯಲ್ ಜಾನ್ ಸೇರಿದಂತೆ 26 ಜನ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT