ದಿವಾನ್ ಅಲಿಯ ಮರಣೋತ್ತರ ಪರೀಕ್ಷೆ ನಡೆಸಿದ್ದ ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯ ವೈದ್ಯರು ವರದಿ ನೀಡಿದ್ದಾರೆ. ದುಷ್ಕರ್ಮಿಗಳು ಅಲಿಗೆ 17 ಕಡೆ ಮಾರಕಾಸ್ತ್ರಗಳಿಂದ ಕೊಚ್ಚಿರುವ ಗುರುತುಗಳು ದೇಹದಲ್ಲಿ ಪತ್ತೆಯಾಗಿವೆ. ಹಂತಕರು ಪಿಸ್ತೂಲ್ನಿಂದ ಹಾರಿಸಿದ ಗುಂಡು ಅಲಿಯ ದೇಹದಿಂದ ತೂರಿಕೊಂಡು ಹೊರ ಹೋಗಿದೆ ಎಂಬ ಸಂಗತಿ ಶವಪರೀಕ್ಷೆ ವರದಿಯಿಂದ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.