ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತ ಆಯೋಗದ ಹೊಸ ಬೇಡಿಕೆ

Last Updated 26 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿರುವ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವು (ಎನ್‌ಸಿಎಂ) ಇದೀಗ ಆ ಬೇಡಿಕೆಯನ್ನು ಬದಿಗೊತ್ತಿ, ಮಾನವ ಹಕ್ಕು ಆಯೋಗಕ್ಕೆ ನೀಡಿದಂತೆ ತನಗೂ ತನಿಖಾ ಅಧಿಕಾರವನ್ನು ಕೊಡಬೇಕೆಂದು ಒತ್ತಾಯಿಸಿದೆ.

`ಎನ್‌ಸಿಎಂ ಕಾಯ್ದೆಗೆ ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಇಟ್ಟ ಬೇಡಿಕೆಯನ್ನು ಕೈಬಿಡಲಾಗಿದೆ. ಇದೇ ಕಾಯ್ದೆಗೆ ಸಾಂವಿಧಾನಿಕ ಸ್ಥಾನಮಾನ ನೀಡುವುದರಿಂದ ಏನೂ ವ್ಯತ್ಯಾಸವಾಗುವುದಿಲ್ಲ~ ಎಂದು ಆಯೋಗದ ಅಧ್ಯಕ್ಷ ವಜಹತ್ ಹಬೀಬುಲ್ಲಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

`ನ್ಯಾಯಾಂಗ ಹಾಗೂ ಆಡಳಿತದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಲು ಆಯೋಗಕ್ಕೆ ಅವಕಾಶ ನೀಡಬೇಕಾಗಿದೆ. ಹಾಗೆಂದು ಆಯೋಗವು ಇವುಗಳ ಸ್ಥಾನವನ್ನು ಆಕ್ರಮಿಸಿಕೊಳ್ಳಲಾಗದು~ ಎಂದೂ ಅವರು ಹೇಳಿದ್ದಾರೆ.

ಈಗ ಜಾರಿಯಲ್ಲಿರುವ ಎನ್‌ಸಿಎಂ ಕಾಯ್ದೆಯಲ್ಲಿ ಕೆಲವು ಲೋಪಗಳಿಗೆ ಎನ್ನುವುದನ್ನು ಒಪ್ಪಿಕೊಂಡ ಅವರು `ಇದರಲ್ಲಿ ಸಾಕಷ್ಟು ತನಿಖಾ ಅಧಿಕಾರವಿಲ್ಲ~ ಎಂದಿದ್ದಾರೆ.

 ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ನೀಡಲಾಗಿರುವ ತನಿಖಾ ಅಧಿಕಾರವನ್ನು ಅಲ್ಪಸಂಖ್ಯಾತ ಆಯೋಗಕ್ಕೂ ನೀಡಬೇಕು ಎನ್ನುವುದು ನಮ್ಮ ಬೇಡಿಕೆ~ ಎಂದಿದ್ದಾರೆ.

`ಆಯೋಗವು ಎರಡು-ಮೂರು ತಿಂಗಳ ಹಿಂದೆಯೇ ಸಂಬಂಧಪಟ್ಟ ಸಚಿವಾಲಯದ ಮುಂದೆ ಬೇಡಿಕೆಗಳನ್ನು ಇಟ್ಟಿದೆ. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬಹುಶಃ ಸಚಿವಾಲಯವು ನಮ್ಮ ಬೇಡಿಕೆಗಳನ್ನು ಪರಿಶೀಲಿಸುತ್ತಿರಬಹುದು~ ಎಂದು ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT