ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತರಿಗೆ ಟಿಕೆಟ್- ಆಗ್ರಹ

Last Updated 4 ಏಪ್ರಿಲ್ 2013, 19:48 IST
ಅಕ್ಷರ ಗಾತ್ರ

ಬೊಮ್ಮನಹಳ್ಳಿ: ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಬೊಮ್ಮನಹಳ್ಳಿ ಮುಸ್ಲಿಂ ಯೂತ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ರಾಷ್ಟ್ರೀಯ ಹೆದ್ದಾರಿ- 7ರ ಬೊಮ್ಮನಹಳ್ಳಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಸಂಖ್ಯೆಯ ಅಲ್ಪಸಂಖ್ಯಾತ ಸಮುದಾಯದವರು, `ಕ್ಷೇತ್ರದಲ್ಲಿ 60 ಸಾವಿರ ಅಲ್ಪ ಸಂಖ್ಯಾತ ಮತದಾರರಿದ್ದು ಹಿಂದಿನಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದೇವೆ. ಈ ಬಾರಿ ಪಕ್ಷದ ಹಳೆಯ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು. ಕ್ರಿಮಿನಲ್ ಹಿನ್ನೆಲೆಯುಳ್ಳವರಿಗೆ ಟಿಕೆಟ್ ನೀಡಬಾರದು' ಎಂದು ಆಗ್ರಹಿಸಿದರು.

ಪಾಲಿಕೆ ಮಾಜಿ ಸದಸ್ಯ ಸೈಯದ್ ಅನ್ಸರ್, ಬೊಮ್ಮನಹಳ್ಳಿ ಮುಸ್ಲಿಂ ಯೂತ್ ವೆಲ್‌ಫೇರ್ ಅಸೋಸಿಯೇಷನ್‌ನ ಪದಾಧಿಕಾರಿಗಳಾದ ಇನಾಯತ್, ವಜೀರ್, ಶೌಖತ್, ಫಯಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT