ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಳವಂಡಿ: 10 ಜನರಿಗೆ ಕಡಿದ ಹುಚ್ಚು ನಾಯಿ

Last Updated 3 ಏಪ್ರಿಲ್ 2013, 6:36 IST
ಅಕ್ಷರ ಗಾತ್ರ

ಕೊಪ್ಪಳ: ತಾಲ್ಲೂಕಿನ ಅಳವಂಡಿ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ಹುಚ್ಚು ನಾಯಿ ಕಡಿದ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ.

ಈ ಪೈಕಿ ಮಹಿಳೆಯೊಬ್ಬಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೇಸಿಗೆ ಹಿನ್ನೆಲೆಯಲ್ಲಿ ಮನೆಯಂಗಳದಲ್ಲಿ ಮಲಗಿದ್ದ ಕೆಲವರಿಗೆ ಕಡಿದಿರುವ ಹುಚ್ಚು ನಾಯಿ, ಹೊಲಕ್ಕೆ ಹೊರಟಿದ್ದ ಬಸವಣ್ಣೆಮ್ಮ ಹೊರಪ್ಯಾಟಿ (55) ಎಂಬ ಮಹಿಳೆಯ ಎಡಗಾಲು ಮತ್ತು ಬಲಗೈಗೆ ಕಚ್ಚಿದೆ.

ಈ ಘಟನೆಯಲ್ಲಿ ಗಾಯಗೊಂಡವರ ಪೈಕಿ ಗೂಳಪ್ಪ ಹೋರಿ, ಮಂಜುನಾಥ, ಸಾಗರ್, ಶಫಿ ಎಂಬುವವರಿಗೆ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ.

ಆದರೆ, ತೀವ್ರವಾಗಿ ಗಾಯಗೊಂಡಿರುವ ಬಸವಣ್ಣೆಮ್ಮಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಉಳಿದ ಗಾಯಾಳುಗಳ ವಿವರ ಲಭ್ಯವಾಗಿಲ್ಲ.

ಔಷಧಿ ಕೊರತೆ: ನಾಯಿ ಕಚ್ಚಿದ ಸಂದರ್ಭದಲ್ಲಿ ನೀಡಲಾಗುವ ಔಷಧಿ ಅಳವಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಭ್ಯ ಇಲ್ಲದೇ ಇರುವುದರಿಂದ ಗಾಯಾಗಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಲಾಯಿತು ಎಂದು ಗ್ರಾಮಸ್ಥರೊಬ್ಬರು       ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT