ನವದೆಹಲಿ (ಪಿಟಿಐ): `ಪಶ್ಚಿಮಘಟ್ಟ ಪರಿಸರ ತಜ್ಞರ ಸಮಿತಿ~ ವರದಿ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿಗೆ ನೀಡಿದ್ದ ಕಾಲಾವಕಾಶವನ್ನು ಕೇಂದ್ರ ಪರಿಸರ ಸಚಿವಾಲಯ 4 ತಿಂಗಳು ವಿಸ್ತರಿಸಿದೆ.
ಪರಿಸರ ತಜ್ಞ ಮಾಧವ ಗಾಡ್ಗೀಳ್ ಅವರ ತಂಡ `ಅಭಿವೃದ್ಧಿ ಹೆಸರಲ್ಲಿ ಪಶ್ಚಿಮಘಟ್ಟಗಳಲ್ಲಿನ ಪ್ರಕೃತಿ ವಿರೋಧಿ ಚಟುವಟಿಕೆ ಮತ್ತು ಪರಿಹಾರಗಳ~ ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯನ್ನು ಕೆಲ ರಾಜ್ಯಗಳು ವಿರೋಧಿಸಿದ್ದವು. ಗಾಡ್ಗೀಳ್ ವರದಿ ಪುನರ್ ಪರಿಶೀಲನೆಗಾಗಿ ಕೇಂದ್ರವು ಆ. 1ರಂದು ವಿಜ್ಞಾನಿ ಕೆ.ಕಸ್ತೂರಿರಂಗನ್ ನೇತೃತ್ವದಲ್ಲಿ ತಂಡ ರಚಿಸಿತ್ತು. ಈ ತಂಡಕ್ಕೆ ವರದಿ ಸಲ್ಲಿಸಲು ಸರ್ಕಾರ ಫೆ.16ರವರೆಗೆ ಕಾಲಾವಕಾಶ ನೀಡಿದೆ.