ನಗರದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಕೊಳವೆ ಬಾವಿಗಳ ಮುಖಾಂತರ ಮಿನಿ ಟ್ಯಾಂಕುಗಳಿಗೆ ಸರಬರಾಜಾಗುತ್ತಿದ್ದ ನೀರಿನ ವ್ಯವಸ್ಥೆಯನ್ನು ಜಲಮಂಡಳಿ ಅಧಿಕಾರಿಗಳು ಏಕಾಏಕಿ ರದ್ದುಪಡಿಸಿರುವುದು ಕಾರಣ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. 31 ವಾರ್ಡ್ಗಳಿಗೂ ಕಾವೇರಿ ನೀರು ಸರಬರಾಜು ಮಾಡಲಾಗುವುದು ಎಂದು ಸುಳ್ಳು ಭರವಸೆ ನೀಡಿ ಜನರನ್ನು ವಂಚಿಸುತ್ತಿದ್ದಾರೆ ಎಂದರು.ನಂತರ ನಗರಸಭೆ ಅಧ್ಯಕ್ಷ ಸಾಬಾನ್ ಸಾಬ್, ಉಪಾಧ್ಯಕ್ಷ ಬಿ.ಉಮೇಶ್, ಮಾಜಿ ಅಧ್ಯಕ್ಷ ಕೆ.ಶೇಷಾದ್ರಿ, ಆಯುಕ್ತ ಸಿದ್ಧರಾಜು ಆಗಮಿಸಿ ಮಂಗಳವಾರ ನಗರಸಭೆಯ ತುರ್ತು ಸಭೆ ಕರೆಯಲಾಗಿದ್ದು, ನಗರದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ನಂತರ ಪ್ರತಿಭಟನಾಕಾರರು ಹಿಂದಿರುಗಿದರು.