ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಮರ್ಪಕ ವಿದ್ಯುತ್ ಪೂರೈಕೆ: ಪ್ರತಿಭಟನೆ

Last Updated 21 ಜೂನ್ 2011, 9:00 IST
ಅಕ್ಷರ ಗಾತ್ರ

ಹೊಸನಗರ: ಇಪ್ಪತ್ತು ದಿನಗಳಿಂದ ತಾಲ್ಲೂಕಿನಾದ್ಯಂತ ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಸೋಮವಾರ ಇಲ್ಲಿನ ಮೆಸ್ಕಾಂ  ಕಚೇರಿಗೆ ಸಾರ್ವಜನಿಕರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಸಾಗರದಿಂದ ಹೊಸನಗರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33 ಕೆ.ವಿ. ಮಾರ್ಗದ ನಿರ್ವಹಣೆ ಹೊತ್ತಿರುವ ಗುತ್ತಿಗೆದಾರರ ನಿರ್ಲಕ್ಷ್ಯವೇ ಈ ಅವ್ಯವಸ್ಥೆಗೆ ಕಾರಣ ಪ್ರತಿಭಟನಾಕಾರರು ದೂರಿದರು.

ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ದೀಪಕ್ ಕಾಮತ್ ಮಾತನಾಡಿ, ಸಾಗರ-ಹೊಸನಗರ ಮಾರ್ಗದಲ್ಲಿರುವ ಮರಗಳ ಅಡಚಣೆಯಿಂದ ಈ ತೊಂದರೆ ಆಗುತ್ತಿದೆ. ಮಾರ್ಗದ ಗುತ್ತಿಗೆದಾರರ ಈ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದರು.

ಹೊಸನಗರ-ಸಾಗರ 33 ಕೆ.ವಿ. ಮಾರ್ಗವು ಅತ್ಯಂತ ಹಳೆಯದಾಗಿದ್ದು,  ಇದರ ನವೀಕರಣಕ್ಕೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆದಿದೆ ಎಂದರು.

ವಿವಿಧ ಪಕ್ಷದ ಮುಖಂಡರು, ಗ್ರಾಮಸ್ಥರು, ಸಂಘ-ಸಂಸ್ಥೆ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT