ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಜನೇಯಸ್ವಾಮಿ ಪಾಳ್ಯಸೇವೆ

Last Updated 21 ಜನವರಿ 2011, 8:15 IST
ಅಕ್ಷರ ಗಾತ್ರ

ಮದ್ದೂರು: ಪಟ್ಟಣದ ಗಂಗಾಮತಸ್ಥರ ಬೀದಿಯಲ್ಲಿ ಆಂಜನೇಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ಮೂರ್ತಿಯ ಮೆರವಣಿಗೆ ಹಾಗೂ ಪಾಳ್ಯ ಸೇವೆ ಕಾರ್ಯಕ್ರಮ ಗುರುವಾರ ಸಂಭ್ರಮದಿಂದ ನಡೆಯಿತು.

ಶಿಂಷಾ ನದಿಯಿಂದ ಆಂಜನೇಯಸ್ವಾಮಿ ಮೂರ್ತಿಯನ್ನು ಹೊಂಬಾಳೆ ಸಮೇತ ಮೀಸಲು ನೀರು ತರುವುದರೊಂದಿಗೆ ಮೆರವಣಿಗೆ ಮೂಲಕ ಸಂಭ್ರಮದಿಂದ ಕರೆ ತರಲಾಯಿತು. ಶುಕ್ರವಾರ ಮುಂಜಾನೆ 4.11 ಗಂಟೆಗೆ ಆಂಜನೇಯಸ್ವಾಮಿ ಪ್ರಾಣ ಪ್ರತಿಷ್ಠಾಪನೆ, ಅಷ್ಟ ಬಂಧನ, ನೇತ್ರೋನ್ಮಿಲನ, ಮುಖ್ಯ ಪ್ರಾಣ ಹೋಮ, ಪೂರ್ಣಾಹುತಿ, ಅಭಿಷೇಕ, ಅಲಂಕಾರ ಹಾಗೂ ನೈವೇದ್ಯ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.

ಬೆ.8ಗಂಟೆಗೆ ಸ್ವಾಮಿ ಅಭಿಷೇಕ ನಡೆಯಲಿದ್ದು, ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ನಂತರ ಅದೇ ರಾತ್ರಿ 11ಗಂಟೆಗೆ ಪತ್ತಿನ ಮೆರವಣಿಗೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲು ಗಂಗಾಪರಮೇಶ್ವರಿ ಸಂಘದ ಅಧ್ಯಕ್ಷ ಶಂಕರ್ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT