ಎಂದಿನಂತೆ ಪೊಲೀಸರು ಈ ಭಾಗದಲ್ಲಿ ವಾಹನಗಳ ತಪಾಸಣೆ ನಡೆಸುವ ಕಾರ್ಯದಲ್ಲಿದ್ದರು. ಇವರ ಕಾರನ್ನು ತಪಾಸಣೆ ನಡೆಸಿದಾಗ ಒಟ್ಟು ರೂ. 2.92ಕೋಟಿ ಹಣ ಕಾರಿನಲ್ಲಿ ದೊರೆತಿದೆ. ಹಣವನ್ನು ವಶಪಡಿಸಿಕೊಂಡು ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ. ಇವರು ಪ್ರವಾಸಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದರು.
ಭೂಮಿಯನ್ನು ಮಾರಾಟ ಮಾಡಿದರಿಂದ ಬಂದ ಹಣ ಇದಾಗಿದೆ ಎಂದು ಬಂಧಿತರು ಹೇಳಿಕೆಯನ್ನು ನೀಡಿದ್ದಾರೆ. ಆದರೆ, ಈ ಹೇಳಿಕೆ ನಂಬಲರ್ಹವಾಗಿಲ್ಲ. ಹೆಚ್ಚಿನ ವಿಚಾರಣೆಗೆ ಅವರನ್ನು ಒಳಪಡಿಸಲಾಗಿದೆ ಎಂದಿದ್ದಾರೆ.