ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರಕ್ಕೆ ನೀರು ರಾಜ್ಯ ಸಮ್ಮತಿ

Last Updated 12 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಹೈದರಾಬಾದ್ (ಪಿಟಿಐ): ಅನಂತಪುರ ಜಿಲ್ಲೆಯ ಕುಡಿಯುವ ನೀರಿನ ಅಗತ್ಯ ಪೂರೈಸಲು 2.626 ಟಿಎಂಸಿ ನೀರು ಬಿಡಲು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ ಎಂದು ಆಂಧ್ರ ತಿಳಿಸಿದೆ.

ಮುಖ್ಯಮಂತ್ರಿ ಎನ್.ಕಿರಣ್ ಕುಮಾರ್ ರೆಡ್ಡಿ ಈ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಕುಡಿಯುವ ನೀರಿನ 3  ಯೋಜನೆಗಳಿಗಾಗಿ ತುಂಗಭದ್ರಾ ಮಂಡಳಿಯು ನೀರು ಬಿಡಲು ಸಮ್ಮತಿಸಿದೆ.  ಅನಂತಪುರ ಪಟ್ಟಣ, ಸತ್ಯಸಾಯಿ ಗ್ರಾಮೀಣ ನೀರು ಸರಬರಾಜು ಮತ್ತು ಶ್ರೀರಾಮಿ ರೆಡ್ಡಿ ಯೋಜನೆಗಳಿಗೆ ಈ ನೀರನ್ನು ಬಳಸಿಕೊಳ್ಳಲಾಗುತ್ತದೆ ಎಂದು ಅಧಿಕೃತ ಹೇಳಿಕೆ ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT