ಮುಖ್ಯಮಂತ್ರಿ ಎನ್.ಕಿರಣ್ ಕುಮಾರ್ ರೆಡ್ಡಿ ಈ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಕುಡಿಯುವ ನೀರಿನ 3 ಯೋಜನೆಗಳಿಗಾಗಿ ತುಂಗಭದ್ರಾ ಮಂಡಳಿಯು ನೀರು ಬಿಡಲು ಸಮ್ಮತಿಸಿದೆ. ಅನಂತಪುರ ಪಟ್ಟಣ, ಸತ್ಯಸಾಯಿ ಗ್ರಾಮೀಣ ನೀರು ಸರಬರಾಜು ಮತ್ತು ಶ್ರೀರಾಮಿ ರೆಡ್ಡಿ ಯೋಜನೆಗಳಿಗೆ ಈ ನೀರನ್ನು ಬಳಸಿಕೊಳ್ಳಲಾಗುತ್ತದೆ ಎಂದು ಅಧಿಕೃತ ಹೇಳಿಕೆ ವಿವರಿಸಿದೆ.