ಕೆಂಭಾವಿ: ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ಕೆಜೆಪಿ ಸಮಾವೇಶ ನಡೆಯುವ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಬತ್ತದ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್ಗೆ ಆಕಸ್ಮಿಕ ಬೆಂಕಿ ತಗುಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು.
ಕೆಜೆಪಿ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬರುವ ಕೆಲ ಕ್ಷಣಗಳ ಮುಂಚೆ ಈ ಘಟನೆ ಸಂಭವಿಸಿದ್ದು, ಯಾವುದೇ ಅನಾಹುತವಾಗಿಲ್ಲ. ಕೆಲಕಾಲ ಜನ ಹಾಗೂ ಪೊಲೀಸರಲ್ಲಿ ಆತಂಕ ಹುಟ್ಟಿಸಿತ್ತು. ತಕ್ಷಣವೇ ಜನರು ನೀರು ಹಾಕಿ ಬೆಂಕಿ ನಂದಿಸಿ ಅನಾಹುತವನ್ನು ತಪ್ಪಿಸಿದರು.