ವಿಧಾನಪರಿಷತ್ ಸದಸ್ಯ ಡಾ. ದೊಡ್ಡರಂಗೇಗೌಡ ಅವರು ಮಾತನಾಡಿ, `ತಮ್ಮ ಬೇಳೆ ಬೇಯಿಸಿಕೊಳ್ಳಲು ಕೆಲ ಸಾಹಿತಿಗಳು ಬಿಜೆಪಿ ಕೋಮುವಾದಿ ಪಕ್ಷ ಎಂದು ಟೀಕೆ ಮಾಡಿದ್ದಾರೆ. ಇದು ಜ್ಞಾನಪೀಠ ಪಡೆದವರಿಗೆ ಹಾಗೂ ಅವರನ್ನು ಬೆಂಬಲಿಸುವವರಿಗೆ ಶೋಭೆ ತರುವುದಿಲ್ಲ' ಎಂದರು.
ಎನ್ಡಿಎ ಸರ್ಕಾರ ಆಡಳಿತದಲ್ಲಿರುವಾಗ ಅಲ್ಪಸಂಖ್ಯಾತರ ಏಳಿಗೆಗಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ರಾಜ್ಯದಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುವ ಮಠಗಳಿಗೆ ಬಿಜೆಪಿ ಸರ್ಕಾರ ಹಣ ನೀಡಿದೆ. ಇಂಥ ಪಕ್ಷದ ಬಗ್ಗೆ ಟೀಕೆ ಮಾಡುವುದರಲ್ಲಿ ಯಾವ ಪುರುಷಾರ್ಥವೂ ಇಲ್ಲ ಎಂದು ಹೇಳಿದರು.