ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕ್ಷೇಪಾರ್ಹ ಸಂಗತಿ ತಡೆಗೆ: ಆಗ್ರಹ

Last Updated 11 ಜನವರಿ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷ­ಯ­ಗಳ ಪ್ರಕಟಣೆ ತಡೆಗೆ ಚುನಾವಣಾ ಆಯೋಗ ಪರಿಣಾಮಕಾರಿ ಕ್ರಮ ಕೈಗೊ­ಳ್ಳ­ಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ.

ವೈಯಕ್ತಿಕವಾಗಿ ಮತ್ತು ಕೆಲವು ಗುಂಪುಗಳು ಸಾಮಾಜಿಕ ಜಾಲತಾಣ­ಗಳನ್ನು ದುರುಪಯೋಗ ಪಡಿಸಿಕೊಂಡು ರಾಜಕೀಯ ಪ್ರತಿಸ್ಪರ್ಧಿಗಳ ಚಾರಿತ್ರ್ಯ ವಧೆ ಮಾಡುತ್ತಿವೆ ಎಂದು ಪಕ್ಷವು ಆಯೋಗಕ್ಕೆ ಬರೆದ ಪತ್ರದಲ್ಲಿ ಆರೋಪಿಸಿದೆ.

‘ಜಾಲತಾಣಗಳ ದುರ್ಬಳಕೆಯಿಂದ  ಮುಕ್ತ ಮತ್ತು ನ್ಯಾಯಸಮ್ಮತ ಚುನಾ­ವಣೆಗೆ ಅಡ್ಡಿಯಾಗಬಹುದು. ಆದಕಾ­ರಣ ಆಕ್ಷೇಪಾರ್ಹ ಸಂಗತಿಗಳ ತಡೆಗೆ ಪರಿಣಾಮಕಾರಿ ನಿಯಮಗಳನ್ನು ಜಾರಿಗೊಳಿ­ಸುವಂತೆ’ ಎಐಸಿಸಿ ಕಾನೂನು ವಿಭಾಗದ ಕಾರ್ಯದರ್ಶಿ ಕೆ.ಸಿ. ಮಿತ್ತಲ್‌ ಅವರು ಚುನಾವಣಾ ಆಯೋ­ಗದ ಮುಖ್ಯ ಆಯುಕ್ತ ವಿ.ಎಸ್‌. ಸಂಪತ್‌ ಅವರಿಗೆ ಪತ್ರ ಬರೆದಿದ್ದಾರೆ.

ಯುಪಿಎ ಸರ್ಕಾರದ ವಿರುದ್ಧ ನರೇಂದ್ರ ಮೋದಿ ಅವರು ಅಂತರ್ಜಾಲ ತಾಣಗಳನ್ನು ದೊಡ್ಡ ಮಟ್ಟದಲ್ಲಿ ಬಳಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಆಯೋಗಕ್ಕೆ ಪತ್ರ ಬರೆದಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT