ನವದೆಹಲಿ (ಪಿಟಿಐ): ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯಗಳ ಪ್ರಕಟಣೆ ತಡೆಗೆ ಚುನಾವಣಾ ಆಯೋಗ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ವೈಯಕ್ತಿಕವಾಗಿ ಮತ್ತು ಕೆಲವು ಗುಂಪುಗಳು ಸಾಮಾಜಿಕ ಜಾಲತಾಣಗಳನ್ನು ದುರುಪಯೋಗ ಪಡಿಸಿಕೊಂಡು ರಾಜಕೀಯ ಪ್ರತಿಸ್ಪರ್ಧಿಗಳ ಚಾರಿತ್ರ್ಯ ವಧೆ ಮಾಡುತ್ತಿವೆ ಎಂದು ಪಕ್ಷವು ಆಯೋಗಕ್ಕೆ ಬರೆದ ಪತ್ರದಲ್ಲಿ ಆರೋಪಿಸಿದೆ.
‘ಜಾಲತಾಣಗಳ ದುರ್ಬಳಕೆಯಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅಡ್ಡಿಯಾಗಬಹುದು. ಆದಕಾರಣ ಆಕ್ಷೇಪಾರ್ಹ ಸಂಗತಿಗಳ ತಡೆಗೆ ಪರಿಣಾಮಕಾರಿ ನಿಯಮಗಳನ್ನು ಜಾರಿಗೊಳಿಸುವಂತೆ’ ಎಐಸಿಸಿ ಕಾನೂನು ವಿಭಾಗದ ಕಾರ್ಯದರ್ಶಿ ಕೆ.ಸಿ. ಮಿತ್ತಲ್ ಅವರು ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್. ಸಂಪತ್ ಅವರಿಗೆ ಪತ್ರ ಬರೆದಿದ್ದಾರೆ.
ಯುಪಿಎ ಸರ್ಕಾರದ ವಿರುದ್ಧ ನರೇಂದ್ರ ಮೋದಿ ಅವರು ಅಂತರ್ಜಾಲ ತಾಣಗಳನ್ನು ದೊಡ್ಡ ಮಟ್ಟದಲ್ಲಿ ಬಳಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಯೋಗಕ್ಕೆ ಪತ್ರ ಬರೆದಿದೆ ಎನ್ನಲಾಗಿದೆ.