ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟಗಾರರು ಉಡುಗೊರೆ ಪಡೆಯುವಂತಿಲ್ಲ

Last Updated 1 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಕೋಲ್ಕತ್ತ: ಮುಂಬರುವ ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಪಂದ್ಯಗಳ ವೇಳೆ ಆಟಗಾರರು ಯಾವುದೆ ಉಡುಗೊರೆ ಪಡೆಯುವಂತಿಲ್ಲ ಎಂದು ಬಿಸಿಸಿಐ ಸೂಚಿಸಿದೆ.

ಅದೇ ರೀತಿ ಪ್ರತಿ ತಂಡಗಳು ಭದ್ರತಾ ಅಧಿಕಾರಿಯ ಜೊತೆ ಭ್ರಷ್ಟಾಚಾರ ತಡೆ ಅಧಿಕಾರಿಯನ್ನು ನೇಮಿಸುವಂತೆಯೂ ತಿಳಿಸಿದೆ. ಮಂಡಳಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪಂದ್ಯಗಳ ವೇಳೆ ಆಟಗಾರರು ಕುಳಿತುಕೊಳ್ಳುವ `ಡಗ್‌ಔಟ್' ಸಮೀಪ ಹಾಗೂ ಪಂದ್ಯದ ಅಧಿಕಾರಿಗಳು ಕುಳಿತುಕೊಳ್ಳುವ ತಾಣದ ಸಮೀಪ ಇತರರ ಓಡಾಟದ ಮೇಲೆ ನಿಬರ್ಂಧ ಹೇರಲು ನಿರ್ಧರಿಸಲಾಗಿದೆ. ಐಪಿಎಲ್ ಟೂರ್ನಿಯ ವೇಳೆ `ಸ್ಪಾಟ್ ಫಿಕ್ಸಿಂಗ್' ವಿವಾದ ನಡೆದ ಹಿನ್ನೆಲೆಯಲ್ಲಿ ಮಂಡಳಿ ಇಂತಹ ತೀರ್ಮಾನ ಕೈಗೊಂಡಿದೆ.

ಹಂಗಾಮಿ ಅಧ್ಯಕ್ಷ ಜಗಮೋಹನ್ ದಾಲ್ಮಿಯ ಅವರ ಸಲಹೆಯ ಮೇರೆಗೆ ಈ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಸಂಜಯ್ ಪಟೇಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT