ಗುಂಡ್ಲುಪೇಟೆ: ಗ್ರಾಮೀಣ ಪ್ರದೇಶದ ಜನರ ಆಡಳಿತಾತ್ಮಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಜಿ.ಎನ್. ಮಂಜು ನಾಥ್ ಶನಿವಾರ ಹೇಳಿದರು.ತಾಲ್ಲೂಕಿನ ಬೆಳಚಲವಾಡಿ ಗ್ರಾಮ ದಲ್ಲಿ ನಡೆದ ಜನಸ್ಪಂದನಾ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಈ ಸಭೆಯಲ್ಲಿ ರೈತರುಗಳ 85 ಅರ್ಜಿಗಳು ಬಂದಿವೆ, ಇದರಲ್ಲಿ 64 ತಾಲ್ಲೂಕು ಪಂಚಾಯಿತಿ ವ್ಯಾಪ್ತಿಗೆ, 9 ಅರ್ಜಿಗಳು ಕಂದಾಯ ಇಲಾಖೆಗೆ, 7 ಅರ್ಜಿಗಳು ಸಮಾಜ ಕಲ್ಯಾಣ ಇಲಾಖೆಗೆ, 1 ಅರ್ಜಿ ಸೆಸ್ಕ್ಗೆ ಸಂಬಂಧಿಸಿದ್ದು, ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಂದು ಅರ್ಜಿ ಬಂದಿದ್ದು. ಇವುಗಳನ್ನು ಪರಿಶೀಲಿಸಿ ಅತಿ ಶೀಘ್ರ ದಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.