ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೆ ತುಳಿದು ವ್ಯಕ್ತಿ ಸಾವು

Last Updated 17 ಡಿಸೆಂಬರ್ 2013, 19:51 IST
ಅಕ್ಷರ ಗಾತ್ರ

ಕನಕಪುರ: ಕಾಡಿಗೆ ತೆರಳುವ ಮಾರ್ಗದಲ್ಲಿದ್ದ ಕಾಡಾನೆಗಳು ವ್ಯಕ್ತಿಯೊಬ್ಬನನ್ನು ತುಳಿದು ಸಾಯಿಸಿದ ಘಟನೆ ತಾಲ್ಲೂಕಿನ ಕೋಡಿಹಳ್ಳಿ ಅರಣ್ಯ ವಲಯ ವ್ಯಾಪ್ತಿಯ ಕೂತಗಳೆ ಬಳಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ಮೃತ ವ್ಯಕ್ತಿಯನ್ನು ಕೋಡಿಹಳ್ಳಿ ಹೋಬಳಿಯ ಕೂತಗಳೆ ಗ್ರಾಮದ ಲಿಂಗೇಗೌಡರ ಮಗ ಸುರೇಶ್‌­(43) ಎಂದು ಗುರುತಿಸಲಾಗಿದೆ.

ಮಾರಸಂದ್ರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿದ್ದ ಎರಡು ಆನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸಂಜೆ ಕಾಡಿಗೆ ಅಟ್ಟುವ ಪ್ರಯತ್ನ ನಡೆಸಿದ್ದರು. ಆಗ ಸ್ಥಳದಿಂದ ಕಾಲ್ಕಿತ್ತ ಪುಂಡಾನೆಗಳು ಕೂತಗಳೆ ಗ್ರಾಮದ ಮಾರ್ಗವಾಗಿ ಹೋಗು­ತ್ತಿದ್ದಾಗ ದಾರಿಯಲ್ಲಿ ಅಡ್ಡ ಸಿಕ್ಕ ಸುರೇಶ್ ಮೇಲೆ ದಾಳಿ ನಡೆಸಿವೆ.  ಆನೆಯು ಈ ದಾಳಿ ನಡೆಸಿದ್ದು ಕಾಲಿನಿಂದ ತುಳಿದು ಸಾಯಿಸಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT