ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುರ್ವೇದ: ಕೌನ್ಸೆಲಿಂಗ್ ಮುಂದಕ್ಕೆ

Last Updated 11 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಆಯುರ್ವೇದ ಕೋರ್ಸ್ ಪ್ರವೇಶಕ್ಕೆ ಶುಕ್ರವಾರ ನಡೆಯಬೇಕಿದ್ದ ಎರಡನೆಯ ಸುತ್ತಿನ ಕೌನ್ಸೆಲಿಂಗ್ ಮುಂದೂಡುವಂತೆ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.

ಈ ಕೋರ್ಸ್‌ನ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ದೋಷಪೂರಿತವಾಗಿತ್ತು ಎಂದು ದೂರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹುಲುವಾಡಿ ಜಿ. ರಮೇಶ್ ಅವರು, ಹೊಸದಾಗಿ ಕೌನ್ಸೆಲಿಂಗ್ ನಡೆಸಬೇಕು~ ಎಂದು ಸೂಚಿಸಿದ್ದಾರೆ.

 ಮುಂದೂಡಿಕೆ: `ಸ್ನಾತಕೋತ್ತರ ಆಯುರ್ವೇದ ಕೋರ್ಸ್‌ನ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮೊದಲ ಸುತ್ತಿನ ಕೌನ್ಸೆಲಿಂಗ್ ಮುಗಿದಿದೆ. ಕೋರ್ಟ್ ಆದೇಶ ಬಂದಿರುವ ಕಾರಣ ಶುಕ್ರವಾರ ನಡೆಯಬೇಕಿದ್ದ 2ನೇ ಸುತ್ತಿನ ಕೌನ್ಸೆಲಿಂಗ್ ಮುಂದೆ ಹೋಗಿದೆ.

ಸ್ನಾತಕೋತ್ತರ ಹೋಮಿಯೋಪಥಿ ಕೋರ್ಸ್‌ನ 2ನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆಯನ್ನೂ ಮುಂದೂಡಿದ್ದೇವೆ~ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕುಲಸಚಿವ ಡಾ.ಡಿ. ಪ್ರೇಮಕುಮಾರ್ `ಪ್ರಜಾವಾಣಿ~ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT