ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರಾಧನೆಗೆ ಭರದ ಸಿದ್ಧತೆ

Last Updated 10 ಜುಲೈ 2012, 19:30 IST
ಅಕ್ಷರ ಗಾತ್ರ

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ 341ನೇ ಆರಾಧನೆ ಮಹೋತ್ಸವ ಆಗಸ್ಟ್ ಮೊದಲ ವಾರ ನಡೆಯಲಿದ್ದು, ಮಂತ್ರಾಲಯ ಮಠದಲ್ಲಿ ಆರಾಧನಾ ಮಹೋತ್ಸವ ಪೂರ್ವ ಸಿದ್ಧತೆ ಚಟುವಟಿಕೆಗಳು ಗರಿಗೆದರಿವೆ.

ಈ ವರ್ಷ ~ರಾಘವೇಂದ್ರಸ್ವಾಮಿಗಳ ಮಠದ ಆವರಣ~ ಸಂಪೂರ್ಣ ಜಗಮಗಿಸುವ ವಿಶೇಷ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ ವಿದ್ಯುತ್ ದೀಪಾಲಂಕಾರ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಕೆನರಾ ಲೈಟಿಂಗ್ಸ್ ಸಂಸ್ಥೆಯು ವಿದ್ಯುತ್ ದೀಪಾಲಂಕಾರ ಜವಾಬ್ದಾರಿ ವಹಿಸಿಕೊಂಡಿದೆ.

ಮಂತ್ರಾಲಯ ಮಠವು ಈ ವಿಶೇಷ ವಿದ್ಯುತ್ ದೀಪಾಲಂಕಾರಕ್ಕೆ 50 ಲಕ್ಷ ವೆಚ್ಚ ಮಾಡುತ್ತಿದೆ. ಮಂತ್ರಾಲಯ ಮಠಕ್ಕೆ ಮಂಗಳವಾರ ಕೆನರಾ ಲೈಟಿಂಗ್ಸ್ ಸಂಸ್ಥೆಯ ತಾಂತ್ರಿಕ ಸಿಬ್ಬಂದಿ, ಇತರ ಸಿಬ್ಬಂದಿ ಧಾವಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT