ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರುಷಿ ಪ್ರಕರಣ: ಜೀವ ಭಯ- ವಕೀಲರ ಹೇಳಿಕೆ

Last Updated 12 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಗಾಜಿಯಾಬಾದ್ (ಪಿಟಿಐ): ಆರುಷಿ ಕೊಲೆ ಪ್ರಕರಣದ ಸಂಬಂಧ ಆರಂಭದಲ್ಲಿ ಬಂಧನಕ್ಕೊಳಗಾಗಿ ಬಳಿಕ ಬಿಡುಗಡೆ ಗೊಂಡಿದ್ದ ಮೂವರು ಮನೆಕೆಲಸಗಾರರ ಪರ ವಕೀಲರೊಬ್ಬರು ತಮ್ಮ ಜೀವಕ್ಕೆ ಅಪಾಯವಿದೆ ಎಂದು ಹೇಳಿಕೊಂಡಿದ್ದು, ಸೂಕ್ತ ಭದ್ರತೆ ಒದಗಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಆರುಷಿಯ ಮನೆ ಕೆಲಸಗಾರರಾಗಿದ್ದ ಕೃಷ್ಣ, ರಾಜ್‌ಕುಮಾರ್ ಮತ್ತು ವಿಜಯ್ ಮಂಡಲ್ ಅವರ ವಕೀಲರಾದ ನರೇಶ್ ಯಾದವ್ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಕೋರಿದ್ದಾರೆ.

‘ನನಗೆ ಪ್ರಾಣಾಪಾಯವಿದೆ. ಯಾವುದೇ ರೀತಿಯಲ್ಲಿ ತೊಂದರೆ ಆದರೂ ಅದಕ್ಕೆ ಸರ್ಕಾರ ಮತ್ತು ಗಾಜಿಯಾಬಾದ್‌ನ ಪೊಲೀಸ್ ಆಡಳಿತ ಹೊಣೆ’ ಎಂದು ಯಾದವ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT