ಪೀಣ್ಯ ದಾಸರಹಳ್ಳಿ: ಉತ್ತಮ ಪರಿಸರದ ಕೊರತೆ ಎದುರಾಗಿರುವುದರಿಂದ ನಗರ ಪ್ರದೇಶದ ಮಕ್ಕಳು ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಕಿದ್ವಾಯಿ ಗ್ರಂಥಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ತಜ್ಞೆ ಡಾ.ವಿಜಯಲಕ್ಷ್ಮೀ ದೇಶಮಾನೆ ಆತಂಕ ವ್ಯಕ್ತಪಡಿಸಿದರು.
ಅವರು ದಾಸರಹಳ್ಳಿಯ ಶಾರದ ವಿದ್ಯಾಮಂದಿರದಲ್ಲಿ ಹಸಿರು ಪ್ರತಿಷ್ಠಾನ ಆಯೋಜಿಸಿದ್ದ ಆರೋಗ್ಯದ ಅರಿವು ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅತಿಯಾದ ಒತ್ತಡವು ಕೂಡ ಮಕ್ಕಳಿಗೆ ದೈಹಿಕ ಕಾಯಿಲೆಯನ್ನು ತಂದೊಡ್ಡುತ್ತಿದೆ.ಇದಕ್ಕೆ ಪೋಷಕರು ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. ಹಸಿರು ಪ್ರತಿಷ್ಠಾನದ ಗೌರವಾಧ್ಯಕ್ಷ ಎಂ.ಆರ್.ವೆಂಕಟೇಶ್ ಇದ್ದರು.