ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ವ್ಯವಸ್ಥೆ ಅಲಕ್ಷ್ಯ: ವಿಷಾದ

Last Updated 18 ಫೆಬ್ರುವರಿ 2012, 6:55 IST
ಅಕ್ಷರ ಗಾತ್ರ

ಬಾಗಲಕೋಟೆ: ವಿಶ್ವದಲ್ಲಿ ಅತೀ ಹೆಚ್ಚು ವೈದ್ಯಕೀಯ ಸಿಬ್ಬಂದಿ ಭಾರತದಲ್ಲಿ ತಯಾರಾಗುತ್ತಿದ್ದರೂ ಸಹ ವೈದ್ಯಕೀಯ ಪ್ರತಿಭಾ ಫಲಾಯನದಿಂದಾಗಿ ದೇಶದ ಆರೋಗ್ಯ ವ್ಯವಸ್ಥೆ ಅಲಕ್ಷ್ಯಕ್ಕೆ ಒಳಗಾಗಿದೆ ಎಂದು ಬೆಳಗಾವಿಯ ಕೆ.ಎಲ್.ಇ ಹಾರ್ಟ್ ಫೌಂಡೇಶನ್ ನಿರ್ದೇಶಕ ಡಾ. ಎಂ. ಡಿ. ದೀಕ್ಷಿತ್ ಅಭಿಪ್ರಾಯಪಟ್ಟರು.

ನಗರದ ಬಿ.ವಿ.ವಿ. ಸಂಘದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಬಾಯಿ ಮತ್ತು ಮುಖದ ಶಸ್ತ್ರ ಚಿಕಿತ್ಸಕರ ಎರಡನೇ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ವಿದೇಶದಲ್ಲಿರುವ ಆರೋಗ್ಯ ವ್ಯವಸ್ಥೆಗಿಂತ ಭಾರತದಲ್ಲಿನ ಆರೋಗ್ಯ ವ್ಯವಸ್ಥೆ ಕನಿಷ್ಠ ಮಟ್ಟದಲ್ಲಿದೆ ಎಂದ ಅವರು, ಜರ್ಮನಿಯಲ್ಲಿ ಪ್ರತೀ 300 ಜನರಿಗೆ ಒಬ್ಬ ವೈದ್ಯರಿದ್ದಾರೆ, ಆದರೆ ಭಾರತದಲ್ಲಿ ಪ್ರತೀ 2500 ಜನರಿಗೆ ಒಬ್ಬ ವೈದ್ಯರಿದ್ದಾರೆ. ಅದರಲ್ಲೂ ದೇಶದ ಗ್ರಾಮೀಣ ಭಾಗದ ಆರೋಗ್ಯ ವ್ಯವಸ್ಥೆ ತೀರಾ ಕನಿಷ್ಠವಾಗಿದೆ ಎಂದರು.

ಭಾರತದಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯ ಹೊಂದಿರುವ ನಗರಗಳಲ್ಲಿ ಚನ್ಹೈ ಪ್ರಥಮ ಸ್ಥಾನದಲ್ಲಿದೆ ಹಾಗಯೇ  ಬೆಂಗಳೂರು ನಗರ ದ್ವಿತೀಯ ಸ್ಥಾನದಲ್ಲಿದೆ ಎಂದು ಹೇಳಿದರು.
 ಉತ್ತರ ಕರ್ನಾಟಕದ ಆರೋಗ್ಯ ವ್ಯವಸ್ಥೆ ಕನಿಷ್ಠವಾಗಿದ್ದು, ಇದರ ಸುಧಾರಣೆಗೆ ವೈದ್ಯಕೀಯ ಸಮ್ಮೇಳನಗಳು ಪೂರಕವಾಗಿವೆ ಎಂದರು.

ದೇಶದ ವೈದ್ಯಕೀಯ ಸವಾಲುಗಳನ್ನು ಸರಿಯಾಗಿ ಎದುರಿಸಿದ್ದೇ ಆದರೆ 2030ರಿಂದ 2040ದ ವೇಳೆಗೆ ಉತ್ತಮ ಆರೋಗ್ಯ ವ್ಯವಸ್ಥೆ ಕಲ್ಪಿಸಬಹುದಾಗಿದೆ ಎಂದು ಹೇಳಿದರು.


ಡಾ. ಎಸ್. ಪ್ರಭು ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾದ್ಯಕ್ಷ ಸಿದ್ದಣ್ಣ ಶೆಟ್ಟರ ಅಧ್ಯಕ್ಷತೆ ವಹಿಸಿದ್ದರು.  ಸಮ್ಮೇಳನ ಅಧ್ಯಕ್ಷ ಡಾ.ಬಸವರಾಜ ಸಿಕ್ಕೇರಿಮಠ, ಕಾರ್ಯದರ್ಶಿ ಡಾ. ಸಂತೋಷ ಗುಡಿ, ದಂತ ಕಾಲೇಜಿನ ಪ್ರಾಚಾರ್ಯ ಡಾ. ಶ್ರಿನಿವಾಸ್ ವನಕಿ, ಡಾ. ಕುಮಾರಸ್ವಾಮಿ,ಡಾ. ಸತ್ಯಜೀತ್ ದಂಡಗಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT