~ಯಡಿಯೂರಪ್ಪ ಅವರ ಮೇಲಿನ ಆರೋಪಗಳ ಬಗ್ಗೆ ಪಕ್ಷವು ಆಂತರಿಕವಾಗಿ ತನಿಖೆ ನಡೆಸುತ್ತಿದೆ~ ಎಂದು ಈಚೆಗೆ ಬಿಜೆಪಿಯ ವಕ್ತಾರ ಪ್ರಕಾಶ್ ಜಾವಡೇಕರ್ ಅವರು ಹೇಳಿದ್ದರು. ಆದರೆ ಆ ಹೇಳಿಕೆಗೆ ವ್ಯತಿರಿಕ್ತವಾಗಿ, ~ಆಂತರಿಕ ತನಿಖೆ ನಡೆಯತ್ತಿಲ್ಲ~ ಎಂದು ರಾಜನಾಥ್ ಸಿಂಗ್ ಅವರು ಗುರುವಾರ ಇಲ್ಲಿ ತಿಳಿಸಿದ್ದಾರೆ.ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಯಡಿಯೂರಪ್ಪ ಅವರ ಮೇಲೆ ಕ್ರಮ ಜರುಗಿಸುವ ಕುರಿತಂತೆ ಬಿಜೆಪಿಯ ನಾಯಕರಲ್ಲಿ ಯಾವುದೆ ಬಗೆಯ ಭೀನ್ನಾಭಿಪ್ರಾಯಗಳಿಲ್ಲ ಎಂದಿದ್ದಾರೆ.