ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಚಕರ ವೇತನ ಹೆಚ್ಚಳ: ಶೀಘ್ರ ತೀರ್ಮಾನ

Last Updated 10 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ಕೆಂಗೇರಿ: ಮುಜರಾಯಿ ದೇವಾಲಯಗಳ ಆರ್ಚಕರ ವೇತನ ಹೆಚ್ಚಳದ ಬಗ್ಗೆ ಸದ್ಯದಲ್ಲೇ ತೀರ್ಮಾನ ತೆಗೆದಕೊಳ್ಳಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರಿನಿವಾಸ ಪೂಜಾರಿ ಹೇಳಿದರು.

ನಾಗದೇವನಹಳ್ಳಿಯ ಶ್ರಿಸತ್ಯಸಾಯಿ ಮಹಿಳಾ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಕೃಷ್ಣ ಜನ್ಮಾಷ್ಟಮಿಯ ಕೃಷ್ಣ ವೇಷ ಸ್ಪರ್ಧೆಯಲ್ಲಿ ಬಹುಮಾನ ವಿತರಿಸಿ ಮಾತನಾಡಿದರು. ಮುಜರಾಯಿ ದೇವಸ್ಥಾನಗಳ ಜಾಗ ಸಂರಕ್ಷಣೆ ಕುರಿತಂತೆ ಶೀಘ್ರ ಸಭೆ ಕರೆಯಲಾಗುತ್ತಿದ್ದು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಮತ್ತಿಕೆರೆ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಅನಂತರಾಮ್, `ಹಿಂದೂ ದೇವಸ್ಥಾನಗಳಲ್ಲಿ ಶುಚಿತ್ವ ಕಾಪಾಡಬೇಕು. ಅಲ್ಲಿನ ಹುಂಡಿ ಹಣ ಆ ದೇವಸ್ಥಾನದ ಅಭಿವೃದ್ಧಿಗೆ ಬಳಕೆಯಾಗಬೇಕು~ ಎಂದು ಸಚಿವರಲ್ಲಿ ಮನವಿ ಮಾಡಿದರು.

ಸಮಾರಂಭದಲ್ಲಿ ಮಹೇಂದ್ರ ಮನೋತ್, ಶರವಣನ್, ಸುಧೀಂದ್ರಕುಮಾರ್, ಕೆಂಚನೂರು ಶಂಕರ, ಕೃಷ್ಣಾನಂದ ಮಾವಿನ ಕುರ್ವೇ ಉದಯ ಧರ್ಮಸ್ಥಳ, ಪದ್ಮಾ ಕೆ. ಭಟ್ ಉಪಸ್ಥಿತರಿದ್ದರು. ಸರಳಾ ನಿರೂಪಿಸಿದರು. ಪದ್ಮಾ ಕೆ. ಭಟ್ ಸ್ವಾಗತಿಸಿದರು. ಸುಭಾಷ್ ಶೆಟ್ಟಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT