ಶೇ 90ರಷ್ಟು ಸುಟ್ಟು ಗಾಯಗಳಾಗಿರುವ ಜಿಂದಾವಲಿ ಅವರಿಗೆ ಚಿಕಿತ್ಸೆ ನಿರಂತರ ಮುಂದುವರಿದಿದೆ. 72 ತಾಸು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಪ್ಲಾಸ್ಟಿಕ್ ಸರ್ಜನ್ ಡಾ. ಗಣೇಶ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಶಕ್ತಿನಗರದ ಕೆಪಿಸಿ ಆಸ್ಪತ್ರೆಯ ವೈದ್ಯ ಡಾ.ಧನ್ಯಕುಮಾರ `ಪ್ರಜಾವಾಣಿ~ಗೆ ತಿಳಿಸಿದರು.