ಹಿರೇಕೆರೂರ: ತಾಲ್ಲೂಕಿನ ಚಿನ್ನಮುಳಗುಂದ, ಯೋಗಿಕೊಪ್ಪ ಗ್ರಾಮಗಳ ಸುತ್ತಮುತ್ತ ಸುರಿದ ಭಾರಿ ಆಲಿಕಲ್ಲು ಮಳೆಗೆ ಮೆಣಸಿನ ಬೆಳೆ, ಕೋಸು, ಟೊಮೆಟೊ ಸೇರಿದಂತೆ ಹಲವಾರು ತೋಟಗಾರಿಕಾ ಬೆಳೆಗಳು ಹಾನಿಗೊಳಗಾಗಿವೆ.ಈ ಭಾಗದಲ್ಲಿ ನೂರಾರು ಎಕರೆ ಬೆಳೆ ಹಾನಿ ಸಂಭವಿಸಿದೆ. ಆಲಿಕಲ್ಲು ಹೊಡೆತಕ್ಕೆ ಬಹುತೇಕ ಬೆಳೆಗಳೆಲ್ಲ ನೆಲಕ್ಕೆ ಉರುಳಿದ್ದು, ನಂತರದಲ್ಲಿ ಒಣಗಲಾರಂಭಿಸಿವೆ. ಉತ್ತಮ ಬೆಳೆ ಹಾಗೂ ಬೆಲೆಯಿಂದಾಗಿ ಲಾಭದ ನಿರೀಕ್ಷೆಯಲ್ಲಿದ್ದ ರೈತರು ಚಿಂತೆಗೀಡಾಗಿದ್ದಾರೆ.