ಪುಣೆ, ಮಹಾರಾಷ್ಟ್ರ( ಪಿಟಿಐ): ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಭಾನುವಾರ ಇಲ್ಲಿನ ಆಸ್ಪತ್ರೆಯಿಂದ ಬಿಡುಗಡೆಯಾದರು.
~ನಾನು ಈಗ ಆರೋಗ್ಯವಾಗಿದ್ದೇನೆ. ಆದರೆ, ಸ್ಪಲ್ಪ ನಿತ್ರಾಣವಿದೆ. ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ~ ಎಂದು ಅವರು ತಿಳಿಸಿದ್ದಾರೆ.
ಲೋಕಪಾಲ ಮಸೂದೆ ವಿವಾದಕ್ಕೆ ಸಂಬಂಧಿಸಿದಂತೆ ಅವರ ಮುಂದಿನ ಹೆಜ್ಜೆಯ ಬಗ್ಗೆ ವರದಿಗಾರರು ಪ್ರಶ್ನಿಸಿದಾಗ, ಅವರು, ~ನಾನು ಸಂಪೂರ್ಣವಾಗಿ ಗುಣಮುಖವಾದ ನಂತರ ಅದರ ಕುರಿತು ಯೋಚಿಸುತ್ತೇನೆ~ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ತಮ್ಮ ತಂಡದಲ್ಲಿನ ಸದಸ್ಯರ ವಿರುದ್ಧ ಎದ್ದಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಕೇಳಿದಾಗ ಅವರು, `ನಾನು ಹತ್ತು ದಿನಗಳ ಕಾಲ ಹೊರಜಗತ್ತಿನೊಂದಿಗೆ ಸಂಪರ್ಕ ಹೊಂದಿರಲಿಲ್ಲ~ ಎನ್ನುತ್ತ ನೇರವಾಗಿ ಉತ್ತರಿಸದೆ ಜಾರಿಕೊಂಡರು.
ಪ್ರಸ್ತುತ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ರಾಜ್ಯಗಳಲ್ಲಿನ ಅವರ ಉದ್ದೇಶಿತ ಪ್ರವಾಸ ಕುರಿತು ಕೇಳಿದಾಗ, ~ವೈದ್ಯರು ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ಹೇಳಿದ್ದಾರೆ~ ಎಂದರು.
ಆರೋಗ್ಯದಲ್ಲಿ ಸಂಪೂರ್ಣ ಸುಧಾರಣೆ ಕಂಡು ಬಂದ ನಂತರ ಅಣ್ಣಾ ಹಜಾರೆ ಅವರು ಭ್ರಷ್ಟಾಚಾರ ವಿರುದ್ಧದ ತಮ್ಮ ಹೋರಾಟಗಳಲ್ಲಿ ಭಾಗವಹಿಸಬಹುದೆಂದು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ.