ನವದೆಹಲಿ (ಪಿಟಿಐ): ಆಹಾರ ಭದ್ರತಾ ಮಸೂದೆಗಾಗಿಯೇ ವಿಶೇಷ ಅಧಿವೇಶನ ನಡೆಸಬೇಕೆಂಬ ಮಾತುಗಳು ಕೇಳಿಬರುತ್ತಿರುವುದರ ಮಧ್ಯೆಯೇ ಮಸೂದೆ ವಿಚಾರದಲ್ಲಿ ಎಲ್ಲಾ ಅವಕಾಶಗಳನ್ನು ಮುಕ್ತವಾಗಿರಿಸಿಕೊಂಡಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ಇಲ್ಲಿ ಹೇಳಿದೆ.
ಮಸೂದೆ ಬಗ್ಗೆ ಪ್ರಮುಖ ಮಿತ್ರ ಪಕ್ಷಗಳ ಅಭಿಪ್ರಾಯ ಪಡೆಯಲು ಕಾಂಗ್ರೆಸ್ ಯುಪಿಎ ಸಮನ್ವಯ ಸಮಿತಿ ಸಭೆ ಕರೆದಿತ್ತು. ಸಭೆಯ ನಂತರದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಮಲ್ನಾಥ್ ಈ ಹೇಳಿಕೆ ನೀಡಿದ್ದಾರೆ.