ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಹ್ವಾನ ಸ್ವೀಕಾರ

Last Updated 9 ಜುಲೈ 2012, 19:30 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ): ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ ಅಧ್ಯಯನ ಪೀಠದ ಮುಖ್ಯಸ್ಥರಾಗಲು ಕೇಂಬ್ರಿಜ್‌ನ  ಖ್ಯಾತ ಅರ್ಥಶಾಸ್ತ್ರಜ್ಞ, ಭಾರತೀಯ ಮೂಲದ ಪ್ರೊ. ಅಜಿತ್ ಸಿಂಗ್ ಸಮ್ಮತಿಸಿದ್ದಾರೆ.

`ಮನಮೋಹನ್ ಸಿಂಗ್ ಅಧ್ಯಯನ ಪೀಠ~ದ ಮುಖ್ಯಸ್ಥರಾಗುವಂತೆ ಪಂಜಾಬ್ ವಿವಿಯು ಮೇ ತಿಂಗಳಲ್ಲಿ ಅಜಿತ್ ಸಿಂಗ್ ಅವರಿಗೆ ಕೇಳಿಕೊಂಡಿತ್ತು. ಪ್ರೊ. ಸಿಂಗ್ ಅವರು ಈಗ ಅಧಿಕೃತವಾಗಿ ಆಹ್ವಾನವನ್ನು ಸ್ವೀಕರಿಸಿದ್ದಾರೆ.

`ಇದೊಂದು ದೊಡ್ಡ ಗೌರವ ಎಂದೇ ನಾನು ಭಾವಿಸುತ್ತೇನೆ. ಮನಮೋಹನ್ ಸಿಂಗ್ ಅವರು  ಅತ್ಯುತ್ತಮ ಗುಣಗಳನ್ನು ಹೊಂದಿದ್ದಾರೆ. ಮಾತ್ರವಲ್ಲದೇ, ನಾನು ಪಂಜಾಬ್ ವಿವಿಯಲ್ಲಿ ಅರ್ಥಶಾಸ್ತ್ರ ಅಧ್ಯಯನ ಮಾಡಲು ಆರಂಭಿಸಿದಾಗ ಅವರು ನನ್ನ ಬೋಧಕರಾಗಿದ್ದರು~ ಎಂದು ಅಜಿತ್ ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT