ಚೆನ್ನೈ (ಪಿಟಿಐ): ಅನೇಕ ಹಗರಣಗಳನ್ನು ಎದುರಿಸುತ್ತಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜನರ ಲಕ್ಷವನ್ನು ಬೇರೆಡೆ ಸೆಳೆಯುವ ತಂತ್ರವಾಗಿ ಆರ್ಥಿಕ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದೆ.
ಆದ್ದರಿಂದ ಕೇಂದ್ರ ಸರ್ಕಾರದ ಭ್ರಷ್ಟಾಚಾರ ಮತ್ತು ಎಫ್ಡಿಐಗೆ ಅನುಮತಿ ನೀಡಿದ ನಿರ್ಧಾರದ ವಿರುದ್ಧ ರಾಷ್ಟ್ರದಾದ್ಯಂತ ಅ.11ರಿಂದ 20ರವರೆಗೆ ಜನಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳೀಧರ್ ರಾವ್ ತಿಳಿಸಿದ್ದಾರೆ.