ಚಿಕ್ಕಬಳ್ಳಾಪುರ: ನಗರದ ಪಂಚಗಿರಿ ಬೋಧನಾ ಪ್ರೌಢಶಾಲೆ ಆವರಣದಲ್ಲಿ ಜ.24ರಂದು ಬೆಳಿಗ್ಗೆ 10.30ಕ್ಕೆ ಪಂಚಗಿರಿ ಇಕೊ ಕ್ಲಬ್ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದ್ದು, ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರಿಗೆ ಸನ್ಮಾನ ನಡೆಯಲಿದೆ.
ನಗರಸಭೆ ಅಧ್ಯಕ್ಷ ಬಿ.ಎ.ಲೋಕೇಶ್ಕುಮಾರ್, ಅರಣ್ಯ ಸಂರಕ್ಷಣಾ ಅಧಿಕಾರಿಗಳಾದ ರಾಜಶೇಖರ್, ಐ.ವಿ.ನಾಗೇಶ್, ಪರಿಸರವಾದಿ ವನಸಿರಿ ಉಮೇಶ್, ಸಮಾಜಸೇವಕ ಸುದರ್ಶನ ಭಾಗವಹಿಸಲಿದ್ದಾರೆ. ಕೆ.ವಿ.ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ವಿ.ನವೀನ್ಕಿರಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.