ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಕಡಲೆಕಾಯಿ ಪರಿಷೆ

Last Updated 16 ಡಿಸೆಂಬರ್ 2013, 19:45 IST
ಅಕ್ಷರ ಗಾತ್ರ

ನೆಲಮಂಗಲ:  ಪಟ್ಟಣದ ಸಮೀಪದ ಸೊಂಡೆಕೊಪ್ಪ ರಸ್ತೆಯ ಬಯಲು ಉದ್ಭವ ಶ್ರೀ ವಿನಾಯಕಸ್ವಾಮಿಯ ಬ್ರಹ್ಮ ರಥೋತ್ಸವ (ಕಡಲೆಕಾಯಿ ಪರಿಷೆ) ಮಂಗಳವಾರ ನಡೆಯಲಿದೆ.

ಈ ರಥೋತ್ಸವವು ಕಡಲೆಕಾಯಿ ಪರಿಷೆ ಎಂದೇ ಪ್ರಖ್ಯಾತವಾಗಿದ್ದು, ಸುತ್ತಮುತ್ತಲ ಹಳ್ಳಿಗಳ ಸಾವಿರಾರು ಜನ ಬರುತ್ತಾರೆ.

ಪರಿಷೆ ಪ್ರಯುಕ್ತ ಸುಮಾರು 2ಕಿ.ಮೀ.ನಷ್ಟು ದೂರದ­ವರೆಗೂ ರಸ್ತೆಯ ಅಕ್ಕಪಕ್ಕದಲ್ಲಿ ವ್ಯಾಪಾ­ರಸ್ಥರು ತಮ್ಮ ಅಂಗಡಿಗಳನ್ನು ತೆರೆದಿರುತ್ತಾರೆ.

ಈಗಾಗಲೇ ಒಂದು ವಾರದಿಂದ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ.

ಮಂಗಳವಾರ ಮಧ್ಯಾಹ್ನ 12:30ಕ್ಕೆ ರಥೋತ್ಸವ ನಡೆಯಲಿದ್ದು, ಪ್ರಸಾದ ವ್ಯವಸ್ಥೆ ಮಾಡಲಾಗಿ­ರುತ್ತದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT